ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು.
Cross references
ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು.
ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು.
ಇದಲ್ಲದೆ ಬಾಳ್ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.
ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.