ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು.
Cross references
ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.
ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.
ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ
ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ