ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
Cross references
ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.
ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ.
ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು.
ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.