ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
Cross references
ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.
ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.
ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.
ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.
ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.