Home Bibles ಮಾರ್ಕ 9:25 · ಕನ್ನಡ ಬೈಬಲ್
ಮಾರ್ಕ 9:25 · ಕನ್ನಡ ಬೈಬಲ್

ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.

Cross references

ಯೆಶಾಯ 35:5

ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.

ಜೆಕರ್ಯ 3:2

ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.

ಮತ್ತಾಯ 9:32

ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.

ಮತ್ತಾಯ 12:22

ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.

ಮತ್ತಾಯ 17:18

ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.

ಮಾರ್ಕ 1:25

ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.

ಮಾರ್ಕ 5:7

ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.

ಮಾರ್ಕ 9:15

ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.

ಲೂಕ 4:35

ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.

ಲೂಕ 4:41

ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.

ಲೂಕ 8:29

(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ

ಲೂಕ 9:42

ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.

ಲೂಕ 11:14

ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.

ಅಪೋಸ್ತಲರ ಕೃತ್ಯಗಳು 16:18

ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.

ಯೂದ 1:9

ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.

Interlinear

Choose Theme