Home Bibles ಮಾರ್ಕ 9:31 · ಕನ್ನಡ ಬೈಬಲ್
ಮಾರ್ಕ 9:31 · ಕನ್ನಡ ಬೈಬಲ್

ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.

Cross references

ಮತ್ತಾಯ 16:21

ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

ಮತ್ತಾಯ 20:18

ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.

ಮತ್ತಾಯ 20:28

ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.

ಮತ್ತಾಯ 21:38

ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.

ಮತ್ತಾಯ 26:2

ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.

ಮಾರ್ಕ 8:31

ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

ಮಾರ್ಕ 9:12

ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?

ಲೂಕ 9:44

ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.

ಲೂಕ 18:31

ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

ಲೂಕ 24:26

ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ

ಲೂಕ 24:44

ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

ಯೋಹಾನ 2:19

ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.

ಯೋಹಾನ 3:14

ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.

ಯೋಹಾನ 10:18

ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 4:27

ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್‌ ಜನರ ಸಹಿತ ಒಂದಾಗಿ ಕೂಡಿಕೊಂಡು

2 ತಿಮೋಥೆಯ 2:12

ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.

Interlinear

Choose Theme