ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
Cross references
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.