ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.
Cross references
ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ!
ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ.
ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ?
ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.