ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
Cross references
ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂ
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು.
ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;
ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ
ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.