ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
Cross references
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.
ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.