ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
Cross references
ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
ತರುವಾಯ ಜೆಬೆದಾಯನ ಮಕ್ಕಳ ತಾಯಿಯು ತನ್ನ ಕುಮಾರರೊಂದಿಗೆ ಆತನ ಬಳಿಗೆ ಬಂದು ಆತ ನನ್ನು ಆರಾಧಿಸುತ್ತಾ ಆತನನ್ನು ಏನೋ ಬೇಡಿಕೊಳ್ಳ ಬೇಕೆಂದು ಅಪೇಕ್ಷಿಸಿದಳು.
ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.
ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು.
ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.
ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
ಆತನು ಪೇತ್ರ ಯೋಹಾನರನ್ನು ಕಳುಹಿಸಿ--ನಾವು ಊಟ ಮಾಡುವಂತೆ ಹೋಗಿ ನಮಗೋಸ್ಕರ ಪಸ್ಕವನ್ನು ಸಿದ್ಧಮಾಡಿರಿ ಅಂದನು.
ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು.
ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು.
ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.
ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
ಊಟದಲ್ಲಿ ಆತನ ಎದೆಗೆ ಒರಗಿಕೊಂಡು-- ಕರ್ತನೇ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದಂಥ ಮತ್ತು ಯೇಸು ಪ್ರೀತಿಸಿದಂಥ ಶಿಷ್ಯನು ಹಿಂದೆ ಬರುವದನ್ನು ಪೇತ್ರನು ಹಿಂತಿರುಗಿ ನೋಡಿ
ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.
ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.
ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
ಹಿರಿಯನಾದ ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ--
ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ
ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.