ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
Cross references
ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
ಸಾವಿರದ ಮುನ್ನೂರ ಮೂವತ್ತೈದು ದಿನಗಳು ಬರುವ ವರೆಗೆ ಕಾದಿರುವವನೇ ಭಾಗ್ಯವಂತನು.ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.
ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.
ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.