ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
Cross references
ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್ ಪ್ರಾಂತ್ಯದಲ್ಲಿಯೂ ನೆಫ್ತಲೀಮ್ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ
ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು
ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
ಆಗ ಯಾಕೋ ಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸವಿಾಪದಲ್ಲಿರುವ ಸುಖರ್ ಎಂಬ ಸಮಾರ್ಯದ ಪಟ್ಟಣಕ್ಕೆ ಆತನು ಬಂದನು.
ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.
ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.
ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.
ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.
ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.