Home Bibles ಮತ್ತಾಯ 10:5 · ಕನ್ನಡ ಬೈಬಲ್
ಮತ್ತಾಯ 10:5 · ಕನ್ನಡ ಬೈಬಲ್

ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.

Cross references

2 ಅರಸುಗಳು 17:24

ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್‌ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್‌ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.

ಮತ್ತಾಯ 4:15

ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್‌ ಪ್ರಾಂತ್ಯದಲ್ಲಿಯೂ ನೆಫ್ತಲೀಮ್‌ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ

ಮತ್ತಾಯ 22:3

ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.

ಲೂಕ 9:2

ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.

ಲೂಕ 9:52

ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.

ಲೂಕ 10:1

ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.

ಲೂಕ 10:33

ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು

ಲೂಕ 17:16

ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.

ಯೋಹಾನ 4:5

ಆಗ ಯಾಕೋ ಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸವಿಾಪದಲ್ಲಿರುವ ಸುಖರ್‌ ಎಂಬ ಸಮಾರ್ಯದ ಪಟ್ಟಣಕ್ಕೆ ಆತನು ಬಂದನು.

ಯೋಹಾನ 4:9

ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.

ಯೋಹಾನ 4:20

ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.

ಯೋಹಾನ 4:22

ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.

ಯೋಹಾನ 4:39

ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.

ಯೋಹಾನ 7:35

ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?

ಯೋಹಾನ 8:48

ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.

ಯೋಹಾನ 20:21

ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.

ಅಪೋಸ್ತಲರ ಕೃತ್ಯಗಳು 1:8

ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 8:1

ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.

ಅಪೋಸ್ತಲರ ಕೃತ್ಯಗಳು 8:5

ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.

ಅಪೋಸ್ತಲರ ಕೃತ್ಯಗಳು 10:45

ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.

ಅಪೋಸ್ತಲರ ಕೃತ್ಯಗಳು 22:21

ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.

ರೋಮಾಪುರದವರಿಗೆ 15:8

ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.

1 ತೆಸಲೋನಿಕದವರಿಗೆ 2:16

ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.

Interlinear

Choose Theme