ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
Cross references
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.
ಆತನು ಎಲ್ಲರಿಂದ ಮಹಿಮೆಯನ್ನು ಹೊಂದುತ್ತಾ ಅವರ ಸಭಾಮಂದಿರಗಳಲ್ಲಿ ಬೋಧಿಸಿದನು.
ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.
ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.