ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
Cross references
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.
ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು.
ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ.
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.