ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
Cross references
ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.
ತರುವಾಯ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ತೀರಗಳಿಗೆ ಬಂದನು.
ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.
ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
ತಿರಿಗಿ ಆತನು ತೂರ್ ಸೀದೋನ್ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.
ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!