Home Bibles ಮತ್ತಾಯ 11:21 · ಕನ್ನಡ ಬೈಬಲ್
ಮತ್ತಾಯ 11:21 · ಕನ್ನಡ ಬೈಬಲ್

ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್‌ ಮತ್ತು ಸೀದೋನ್‌ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.

Cross references

ಯೋಬ 42:6

ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.

ಯೆಹೆಜ್ಕೇಲ 3:6

ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.

ಮತ್ತಾಯ 11:22

ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್‌ ಮತ್ತು ಸೀದೋನ್‌ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.

ಮತ್ತಾಯ 12:41

ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.

ಮತ್ತಾಯ 15:21

ತರುವಾಯ ಯೇಸು ಅಲ್ಲಿಂದ ಹೊರಟು ತೂರ್‌ ಸೀದೋನ್‌ ತೀರಗಳಿಗೆ ಬಂದನು.

ಮತ್ತಾಯ 18:7

ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!

ಮತ್ತಾಯ 23:13

ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.

ಮತ್ತಾಯ 26:24

ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.

ಮಾರ್ಕ 3:8

ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್‌ ಸೀದೋನ್‌ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.

ಮಾರ್ಕ 6:45

ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.

ಮಾರ್ಕ 7:24

ಅಲ್ಲಿಂದ ಆತನು ಎದ್ದು ತೂರ್‌ ಸೀದೋನ್‌ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.

ಮಾರ್ಕ 7:31

ತಿರಿಗಿ ಆತನು ತೂರ್‌ ಸೀದೋನ್‌ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.

ಮಾರ್ಕ 8:22

ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.

ಲೂಕ 4:26

ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್‌ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.

ಲೂಕ 6:17

ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್‌ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ

ಲೂಕ 9:10

ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.

ಲೂಕ 10:13

ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್‌ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.

ಲೂಕ 11:42

ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.

ಯೋಹಾನ 1:44

ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು.

ಯೋಹಾನ 3:5

ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

ಯೋಹಾನ 12:21

ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.

ಅಪೋಸ್ತಲರ ಕೃತ್ಯಗಳು 12:20

ತೂರ್‌ ಸೀದೋನ್‌ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ

ಅಪೋಸ್ತಲರ ಕೃತ್ಯಗಳು 13:44

ಮುಂದಿನ ಸಬ್ಬತ್‌ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.

ಅಪೋಸ್ತಲರ ಕೃತ್ಯಗಳು 27:3

ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.

ಅಪೋಸ್ತಲರ ಕೃತ್ಯಗಳು 28:25

ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--

ಯೂದ 1:11

ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!

Interlinear

Choose Theme