ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
Cross references
ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಆತನು ಪರ್ವತವನ್ನಿಳಿದು ಬಂದಾಗ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.
ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.
ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ
ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?