Home Bibles ಮತ್ತಾಯ 11:5 · ಕನ್ನಡ ಬೈಬಲ್
ಮತ್ತಾಯ 11:5 · ಕನ್ನಡ ಬೈಬಲ್

ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.

Cross references

2 ಅರಸುಗಳು 5:7

ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.

2 ಅರಸುಗಳು 5:14

ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.

ಕೀರ್ತನೆಗಳು 22:26

ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.

ಕೀರ್ತನೆಗಳು 72:12

ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.

ಕೀರ್ತನೆಗಳು 146:8

ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;

ಯೆಶಾಯ 29:18

ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.

ಯೆಶಾಯ 35:4

ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.

ಯೆಶಾಯ 42:6

ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --

ಯೆಶಾಯ 43:8

ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.

ಯೆಶಾಯ 61:1

ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಯೆಶಾಯ 66:2

ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.

ಜೆಕರ್ಯ 11:7

ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.

ಮತ್ತಾಯ 5:3

ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.

ಮತ್ತಾಯ 8:1

ಆತನು ಪರ್ವತವನ್ನಿಳಿದು ಬಂದಾಗ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.

ಮತ್ತಾಯ 9:24

ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.

ಮತ್ತಾಯ 9:30

ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.

ಮತ್ತಾಯ 10:8

ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.

ಮತ್ತಾಯ 15:30

ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.

ಮತ್ತಾಯ 21:14

ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.

ಮಾರ್ಕ 7:37

ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.

ಮಾರ್ಕ 9:25

ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.

ಲೂಕ 4:18

ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

ಲೂಕ 7:14

ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.

ಲೂಕ 7:21

ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.

ಯೋಹಾನ 2:23

ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.

ಯೋಹಾನ 3:2

ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.

ಯೋಹಾನ 5:36

ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.

ಯೋಹಾನ 10:25

ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.

ಯೋಹಾನ 10:38

ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.

ಯೋಹಾನ 11:43

ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.

ಯೋಹಾನ 14:11

ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.

ಅಪೋಸ್ತಲರ ಕೃತ್ಯಗಳು 2:22

ಇಸ್ರಾಯೇಲ್‌ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.

ಅಪೋಸ್ತಲರ ಕೃತ್ಯಗಳು 3:2

ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.

ಅಪೋಸ್ತಲರ ಕೃತ್ಯಗಳು 4:9

ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ

ಅಪೋಸ್ತಲರ ಕೃತ್ಯಗಳು 14:8

ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.

ಯಾಕೋಬ 2:5

ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

Interlinear

Choose Theme