Home Bibles ಮತ್ತಾಯ 11:6 · ಕನ್ನಡ ಬೈಬಲ್
ಮತ್ತಾಯ 11:6 · ಕನ್ನಡ ಬೈಬಲ್

ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.

Cross references

ಕೀರ್ತನೆಗಳು 1:1

ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ

ಕೀರ್ತನೆಗಳು 32:1

ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.

ಕೀರ್ತನೆಗಳು 119:1

ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.

ಯೆಶಾಯ 8:14

ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.

ಮತ್ತಾಯ 5:3

ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.

ಮತ್ತಾಯ 13:55

ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?

ಮತ್ತಾಯ 15:12

ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.

ಮತ್ತಾಯ 18:7

ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!

ಮತ್ತಾಯ 24:10

ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.

ಮತ್ತಾಯ 26:31

ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;

ಲೂಕ 2:34

ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.

ಲೂಕ 4:23

ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.

ಲೂಕ 11:27

ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು.

ಯೋಹಾನ 6:60

ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.

ಯೋಹಾನ 6:66

ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.

ಯೋಹಾನ 7:41

ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?

ರೋಮಾಪುರದವರಿಗೆ 9:32

ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.

1 ಕೊರಿಂಥದವರಿಗೆ 1:22

ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;

1 ಕೊರಿಂಥದವರಿಗೆ 2:14

ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.

ಗಲಾತ್ಯದವರಿಗೆ 5:11

ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ?

1 ಪೇತ್ರ 2:8

ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.

Interlinear

Choose Theme