ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.
Cross references
ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.
ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
ಇದಾದ ಮೇಲೆ ಇನ್ನೊಂದು ಸಬ್ಬತ್ತಿನಲ್ಲಿ ಸಹ ಆತನು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿ ದನು; ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.
ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು.
ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು.
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.
ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.
ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ