ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
Cross references
ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.
ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.
ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು.
ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.