ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
Cross references
ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ.
ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.
ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ.
ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.
ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.