ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.
Cross references
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
ಆದರೆ ನಾನು ನಿಮಗೆ ಹೇಳುವದೇನಂದರೆ-- ದೇವಾಲಯಕ್ಕಿಂತಲೂ ದೊಡ್ಡವನು ಈ ಸ್ಥಳದಲ್ಲಿ ಇದ್ದಾನೆ.
ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.
ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
ತಾನೂ ತನ್ನ ಮಕ್ಕಳೂ ತನ್ನ ದನಗಳೂ ಈ ಬಾವಿ ಯಿಂದ ಕುಡಿದು ನಮಗೆ ಅದನ್ನು ಕೊಟ್ಟ ನಮ್ಮ ತಂದೆಯಾದ ಯಾಕೋಬನಿಗಿಂತ ನೀನು ದೊಡ್ಡ ವನೋ? ಅಂದಳು.
ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.