ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
Cross references
ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.
ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.
ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.