Home Bibles ಮತ್ತಾಯ 12:7 · ಕನ್ನಡ ಬೈಬಲ್
ಮತ್ತಾಯ 12:7 · ಕನ್ನಡ ಬೈಬಲ್

ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.

Cross references

ಯೆಹೋಶುವ 5:5

ಐಗುಪ್ತದಿಂದ ಹೊರಟ ಜನರೆಲ್ಲರೂ ಸುನ್ನತಿಮಾಡಲ್ಪಟ್ಟಿದ್ದರು; ಆದರೆ ಐಗುಪ್ತ ದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗದಲ್ಲಿ ಹುಟ್ಟಿದ ಸಕಲ ಜನರು ಸುನ್ನತಿಮಾಡಲ್ಪಡಲಿಲ್ಲ.

ಯೋಬ 32:3

ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.

ಕೀರ್ತನೆಗಳು 94:21

ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.

ಕೀರ್ತನೆಗಳು 109:31

ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.

ಸಾಮೇತಿಗಳು 17:15

ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.

ಯೆಶಾಯ 1:11

ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.

ಹೊಶೇಯ 6:6

ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.

ಮೀಕ 6:6

ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?

ಮತ್ತಾಯ 9:13

ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.

ಮತ್ತಾಯ 22:29

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.

ಅಪೋಸ್ತಲರ ಕೃತ್ಯಗಳು 13:27

ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

ಯಾಕೋಬ 5:6

ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.

Interlinear

Choose Theme