ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.
Cross references
ಐಗುಪ್ತದಿಂದ ಹೊರಟ ಜನರೆಲ್ಲರೂ ಸುನ್ನತಿಮಾಡಲ್ಪಟ್ಟಿದ್ದರು; ಆದರೆ ಐಗುಪ್ತ ದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗದಲ್ಲಿ ಹುಟ್ಟಿದ ಸಕಲ ಜನರು ಸುನ್ನತಿಮಾಡಲ್ಪಡಲಿಲ್ಲ.
ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.
ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?
ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.