ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
Cross references
ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು.ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ.
ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.
ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;