Home Bibles ಮತ್ತಾಯ 13:22 · ಕನ್ನಡ ಬೈಬಲ್
ಮತ್ತಾಯ 13:22 · ಕನ್ನಡ ಬೈಬಲ್

ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.

Cross references

ಆದಿಕಾಂಡ 13:10

ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.

ಯೆಹೋಶುವ 7:20

ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್‌ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ.

2 ಅರಸುಗಳು 5:20

ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.

ಕೀರ್ತನೆಗಳು 52:7

ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.

ಕೀರ್ತನೆಗಳು 62:10

ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.

ಸಾಮೇತಿಗಳು 11:28

ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.

ಸಾಮೇತಿಗಳು 23:5

ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.

ಸಭಾಪ್ರಸಂಗಿ 4:8

ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.

ಸಭಾಪ್ರಸಂಗಿ 5:10

ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ.

ಸಭಾಪ್ರಸಂಗಿ 5:13

ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.

ಯೆರೆಮಿಯ 4:3

ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.

ಮತ್ತಾಯ 6:24

ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.

ಮತ್ತಾಯ 13:7

ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.

ಮತ್ತಾಯ 19:16

ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.

ಮಾರ್ಕ 4:18

ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ

ಮಾರ್ಕ 10:23

ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.

ಲೂಕ 8:14

ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.

ಲೂಕ 12:15

ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.

ಲೂಕ 12:21

ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.

ಲೂಕ 12:29

ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.

ಲೂಕ 14:16

ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.

ಲೂಕ 18:24

ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.

ಲೂಕ 21:34

ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.

ಅಪೋಸ್ತಲರ ಕೃತ್ಯಗಳು 5:1

ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ

ಅಪೋಸ್ತಲರ ಕೃತ್ಯಗಳು 8:18

ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--

1 ತಿಮೋಥೆಯ 6:9

ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

1 ತಿಮೋಥೆಯ 6:17

ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ

2 ತಿಮೋಥೆಯ 4:10

ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;

2 ಪೇತ್ರ 2:14

ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.

1 ಯೋಹಾನ 2:15

ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.

ಯೂದ 1:11

ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!

Interlinear

Choose Theme