ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
Cross references
ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ.
ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ.
ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.
ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ
ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.
ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.
ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.
ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!