ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
Cross references
ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.
ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ. ಇಲ್ಲಿ ಸ್ವಲ್ಪ.
ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.
ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನು ಒಗಟಾಗಿ ಹೇಳು.
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.
ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.
ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ.
ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ?
ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.