ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
Cross references
ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು.
ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ.
ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.