ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
Cross references
ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು.
ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನು ಒಗಟಾಗಿ ಹೇಳು.
ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.
ಆ ದಿನದಲ್ಲಿ ನಿಮ್ಮ ವಿಷಯವಾಗಿ ಸಾಮ್ಯವನ್ನೆತ್ತಿ ದುಃಖವುಳ್ಳ ಗೋಳಾಟವನ್ನು ಮಾಡಿ ಹೇಳುವದೇನಂದರೆ--ನಾವು ಪೂರ್ಣವಾಗಿ ಹಾಳಾ ದೆವು; ಅವನು ನನ್ನ ಜನರ ಪಾಲನ್ನು ಬದಲಾಯಿಸಿ ದ್ದಾನೆ; ಅವನು ಅದನ್ನು ನನ್ನಿಂದ ಹಿಂತೆಗೆದದ್ದು ಹೇಗೆ? ಹಿಂತಿರುಗಿ ಅವನು ನಮ್ಮ ಹೊಲಗಳನ್ನು ಹಂಚಿಕೊಟ್ಟಿ ದ್ದಾನೆ.
ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?
ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು
ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
ಯೇಸು ತಿರಿಗಿ ಸಾಮ್ಯ ರೂಪವಾಗಿ ಅವರ ಕೂಡ ಮಾತನಾಡುತ್ತಾ--
ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;
ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?
ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ--
ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.
ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ
ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.