Home Bibles ಮತ್ತಾಯ 13:30 · ಕನ್ನಡ ಬೈಬಲ್
ಮತ್ತಾಯ 13:30 · ಕನ್ನಡ ಬೈಬಲ್

ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.

Cross references

1 ಸಮುವೇಲ 25:29

ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.

ಯೋಬ 39:12

ಅದು ನಿನ್ನ ಬೀಜವನ್ನು ಮನೆಗೆ ತರುವದೆಂದೂ ನಿನ್ನ ಕಣದಲ್ಲಿ ಕೂಡಿಸುವದೆಂದೂ ಅದನ್ನು ನಂಬುವಿಯೋ?

ಯೆಶಾಯ 27:10

ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು.

ಯೆಹೆಜ್ಕೇಲ 15:4

ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ?

ಮಲಾಕಿ 3:18

ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.

ಮತ್ತಾಯ 3:12

ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.

ಮತ್ತಾಯ 13:39

ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.

ಮತ್ತಾಯ 22:10

ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.

ಮತ್ತಾಯ 25:6

ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.

ಮತ್ತಾಯ 25:32

ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;

ಮತ್ತಾಯ 25:41

ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

ಲೂಕ 3:17

ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.

ಯೋಹಾನ 15:6

ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.

1 ಕೊರಿಂಥದವರಿಗೆ 4:5

ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.

1 ತಿಮೋಥೆಯ 5:24

ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.

Interlinear

Choose Theme