ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
Cross references
ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ಆ ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು.
ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು.
ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ--
ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.