ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
Cross references
ರೊಟ್ಟಿಯ ಕಾಳನ್ನು ಕುಟ್ಟುವನೋ? ಅವನು ಯಾವಾಗಲೂ ಅದನ್ನು ಒಕ್ಕುವದಿಲ್ಲ; ಇಲ್ಲವೇ ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವದಿಲ್ಲ, ಅಥವಾ ಅವನ ಕುದುರೆ ಸವಾರರಿಂದ ಕುಣಿಸುವದಿಲ್ಲ.ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.