ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
Cross references
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು.
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.