ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
Cross references
ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.