Cross references
ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.
ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು.
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.