ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
Cross references
ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ
ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.
ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.
ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ