Home Bibles ಮತ್ತಾಯ 13:52 · ಕನ್ನಡ ಬೈಬಲ್
ಮತ್ತಾಯ 13:52 · ಕನ್ನಡ ಬೈಬಲ್

ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.

Cross references

ಎಜ್ರಾ 7:6

ಈ ಎಜ್ರನು ಇಸ್ರಾ ಯೇಲ್‌ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.

ಎಜ್ರಾ 7:10

ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.

ಎಜ್ರಾ 7:21

ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--

ಸಾಮೇತಿಗಳು 10:20

ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.

ಸಾಮೇತಿಗಳು 11:30

ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.

ಸಾಮೇತಿಗಳು 15:7

ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.

ಸಾಮೇತಿಗಳು 16:20

ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು.

ಸಾಮೇತಿಗಳು 18:4

ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.

ಸಾಮೇತಿಗಳು 22:17

ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.

ಸಭಾಪ್ರಸಂಗಿ 12:9

ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.

ಪರಮಗೀತ 7:13

ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.

ಮತ್ತಾಯ 12:35

ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.

ಮತ್ತಾಯ 23:34

ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ

ಲೂಕ 11:49

ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.

ಯೋಹಾನ 13:34

ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.

2 ಕೊರಿಂಥದವರಿಗೆ 3:4

ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು.

2 ಕೊರಿಂಥದವರಿಗೆ 4:5

ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.

2 ಕೊರಿಂಥದವರಿಗೆ 6:10

ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.

ಎಫೆಸದವರಿಗೆ 3:4

(ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.)

ಎಫೆಸದವರಿಗೆ 3:8

ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.

ಕೊಲೊಸ್ಸೆಯವರಿಗೆ 1:7

ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.

ಕೊಲೊಸ್ಸೆಯವರಿಗೆ 3:16

ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.

1 ತಿಮೋಥೆಯ 3:6

ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.

1 ತಿಮೋಥೆಯ 3:15

ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ

2 ತಿಮೋಥೆಯ 3:16

ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.

ತೀತ 1:9

ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.

ತೀತ 2:6

ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.

1 ಯೋಹಾನ 2:7

ಸಹೋದರರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.

Interlinear

Choose Theme