ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
Cross references
ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.
ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.
ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು.
ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.
ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು.
ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
(ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.)
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.
ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
ಸಹೋದರರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.