ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
Cross references
ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.