ತರುವಾಯ ಯೆರೂಸಲೇಮಿನವರಾದ ಶಾಸ್ತ್ರಿಗಳೂ ಫರಿಸಾಯರೂ ಯೇಸುವಿನ ಬಳಿಗೆ ಬಂದು--
Cross references
ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;
ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು.
ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.