Home Bibles ಮತ್ತಾಯ 15:12 · ಕನ್ನಡ ಬೈಬಲ್
ಮತ್ತಾಯ 15:12 · ಕನ್ನಡ ಬೈಬಲ್

ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.

Cross references

1 ಅರಸುಗಳು 22:13

ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.

ಮತ್ತಾಯ 17:27

ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ

1 ಕೊರಿಂಥದವರಿಗೆ 10:32

ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.

2 ಕೊರಿಂಥದವರಿಗೆ 6:3

ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;

ಗಲಾತ್ಯದವರಿಗೆ 2:5

ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.

ಯಾಕೋಬ 3:17

ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.

Interlinear

Choose Theme