ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.
Cross references
ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.