ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
Cross references
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.
ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.
ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.