ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
Cross references
ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.
ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.
ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು.
ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು.
ಅವರು ತಮ್ಮ ಸ್ವರವೆತ್ತಿ--ಯೇಸುವೇ,ಒಡೆಯನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?