Home Bibles ಮತ್ತಾಯ 15:24 · ಕನ್ನಡ ಬೈಬಲ್
ಮತ್ತಾಯ 15:24 · ಕನ್ನಡ ಬೈಬಲ್

ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.

Cross references

ಯೆಶಾಯ 53:6

ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.

ಯೆರೆಮಿಯ 50:6

ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.

ಯೆಹೆಜ್ಕೇಲ 34:5

ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.

ಯೆಹೆಜ್ಕೇಲ 34:16

ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.

ಯೆಹೆಜ್ಕೇಲ 34:23

ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.

ಮತ್ತಾಯ 9:36

ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.

ಮತ್ತಾಯ 10:5

ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.

ಮತ್ತಾಯ 18:11

ಯಾಕಂದರೆ ಮನುಷ್ಯಕುಮಾರನು ಕಳೆದುಹೋದ ದ್ದನ್ನು ರಕ್ಷಿಸುವದಕ್ಕಾಗಿ ಬಂದನು.

ಲೂಕ 15:4

ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?

ಅಪೋಸ್ತಲರ ಕೃತ್ಯಗಳು 3:25

ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 13:46

ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ರೋಮಾಪುರದವರಿಗೆ 15:8

ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.

Interlinear

Choose Theme